ಮಳವಳ್ಳಿ ತಾಲೂಕು ಶಿವನಸಮುದ್ರ ಬಳಿಯ ನಾಲೆಗೆ ಬಿದ್ದು ಪ್ರಾಣಾಪಾಯದಿಂದ ಒದ್ದಾಡುತ್ತಿದ್ದ ಕಾಡಾನೆಯನ್ನು ರಕ್ಷಿಸುವಲ್ಲಿ ಕರ್ನಾಟಕ ಅರಣ್ಯ ಇಲಾಖೆ ಯಶಸ್ವಿಯಾಗಿದ್ದು, ಅರಣ್ಯಾಧಿಕಾರಿಗಳ ಸಾಹಸಕ್ಕೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.

ಮಂಡ್ಯ ಜಿಲ್ಲೆಯ ಶಿವನಸಮುದ್ರದ ಬಳಿಯ ನಾಲೆಯಲ್ಲಿ ಮೂರು ದಿನಗಳ ಹಿಂದೆ ಬಿದ್ದಿದ್ದ ಕಾಡಾನೆ ರಕ್ಷಿಸಲು ಅರಣ್ಯ ಇಲಾಖೆ ನಡೆಸಿದ್ದ ಮ್ಯಾರಥಾನ್ ರಕ್ಷಣಾ ಕಾರ್ಯಾಚರಣೆ ಕೊನೆಗೂ ಯಶಸ್ವಿಯಾಗಿದೆ. ಅರಣ್ಯ ಇಲಾಖೆಯ ಸತತ ಕಾರ್ಯಾಚರಣೆಯಿಂದಾಗಿ ನಾಲೆಗೆ ಬಿದ್ದಿದ್ದ ಕಾಡಾನೆ ಪ್ರಾಣಾಪಾಯದಿಂದ ಪಾರಾಗಿದೆ.

ಅರಣ್ಯ ಇಲಾಖೆ ಸಿಬ್ಬಂದಿ ಕ್ರೇನ್ ಮೂಲಕ ನಾಲೆಯಿಂದ ಕಾಡಾನೆಯನ್ನು ಮೇಲೆತ್ತಿದ್ದಾರೆ. ಬಳಿಕ ಅದಕ್ಕೆ ಚಿಕಿತ್ಸೆ ನೀಡಿ ಸಮೀಪದ ಹಲಗೂರು ಅರಣ್ಯ ಪ್ರದೇಶದಲ್ಲಿ ಬಿಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕೆಳಗೆ ಬಿದ್ದ ಆನೆ: ಶನಿವಾರ ಬೆಳಗ್ಗೆ 11.15ರ ಸುಮಾರಿಗೆ ಕಾವೇರಿ ನದಿಗೆ ಹೊಂದಿಕೊಂಡಂತೆ ಇರುವ ಬ್ಲಫ್‌ನ ಪಯನಿಯರ್ ಜಂಕೋ ಲಿಮಿಟೆಡ್ ಪವರ್ ಜನರೇಶನ್ ಯುನಿಟ್‌ನ 20 ಅಡಿ ಆಳದ ಕ್ಯಾನಲ್‌ಗೆ ನೀರು ಕುಡಿಯಲು ಬಂದು ಗಂಡಾನೆ ಆಕಸ್ಮಿಕವಾಗಿ ಇಳಿದಿದೆ. ನಂತರ ನೀರಿನ ಹರಿವಿನ ರಭಸಕ್ಕೆ ವಾಪಸ್ ಕೆನಾಲ್‌ನಿಂದ ಮೇಲಕ್ಕೆ ಬರಲು ಆಗದೆ ಕಾಡಾನೆ ಒದ್ದಾಡಿದೆ.ಕಾರ್ಯಾಚರಣೆ: ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸರು ಕಾಡಾನೆಗೆ ಆಹಾರ ನೀಡುತ್ತಾ ಅದರ ಆರೋಗ್ಯ ಮೇಲ್ವಿಚಾರಣೆ ನಡೆಸಿದ್ದರು. ನಾಲೆಯಿಂದ ಆನೆಯನ್ನು ಮೇಲೆತ್ತಲು ಅರಣ್ಯ ಇಲಾಖೆ ಸಿಬ್ಬಂದಿ ಸತತ ಪ್ರಯತ್ನ ಪಟ್ಟಿದ್ದರು. ಆದರೆ ನಾಲೆಯಲ್ಲಿ ನೀರು ಹೆಚ್ಚಾಗಿದ್ದ ಕಾರಣ ಕಾರ್ಯಚರಣೆಗೆ ತೊಡಕಾಗಿತ್ತು. ಇಂದು ನಾಲೆಯ ನೀರನ್ನು ತಗ್ಗಿಸಿ ಕಾರ್ಯಚರಣೆ ಮಾಡಲಾಗಿದೆ.

ಮೊದಲಿಗೆ ಪಟಾಕಿ ಸಿಡಿಸಿ ತಾನಾಗಿಯೇ ಕಾಡಾನೆ ಮೇಲಕ್ಕೆ ಬರುವಂತೆ ಪ್ರಯತ್ನಿಸಲಾಯಿತು. ಆದರೆ ಅದು ಸಾಧ್ಯವಾಗಿಲ್ಲ. ಹೀಗಾಗಿ ಅರಣ್ಯ ಇಲಾಖೆ ಕಂಟೇನರ್ ಬಳಿಸಿ ಕಾಡಾನೆಯನ್ನು ಮೇಲಕ್ಕೆ ತಂದಿದೆ. ಕಾಡಾನೆಗೆ 2 ಬಾರಿ ಅರಿವಳಿಕೆ ಚುಚ್ಚುಮದ್ದು ನೀಡಿ ಅದು ಪ್ರಜ್ಞೆ ಕಳೆದುಕೊಂಡ ಬಳಿಕ ಅದನ್ನು ಕ್ರೇನ್ ಮೂಲಕ ಮೇಲಕ್ಕೆ ತಂದು ಚಿಕಿತ್ಸೆ ನೀಡಲಾಯಿತು.

ಬಳಿಕ ಆನೆ ಪ್ರಜ್ಞೆಗೆ ಮರಳಿದ ಬಳಿಕ ಆನೆಯನ್ನು ಹಲಗೂರು ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಅರಣ್ಯ ಸಿಬ್ಬಂದಿ ಹಾಗೂ ವೈದ್ಯರ ತಂಡ ಕೂಡ ಕಾಡಿಗೆ ತೆರಳಿದ್ದು ಆನೆಯ ಮೇಲ್ವಿಚಾರಣೆಯಲ್ಲಿ ತೊಡಗಿದೆ.

ಆನೆಗೆ ಫಂಗಸ್ ಇನ್ಫೆಕ್ಷನ್: 4 ದಿನಗಳಿಂದ ನೀರಿನೊಳಗೆಯೇ ಇದ್ದ ಕಾರಣ ಕಾಡಾನೆ ಕಾಲಿಗೆ ಫಂಗಸ್ ಆಗಿರುವ ಸಾಧ್ಯತೆ ಇದೆ ಎಂದು ವೈದ್ಯರು ಹೇಳಿದ್ದಾರೆ. ಆಹಾರವಿಲ್ಲದೆ ಕಾಲುವೆಯಲ್ಲಿ ಆನೆ ಒದ್ದಾಡಿತ್ತು. ಹೀಗಾಗಿ ಆನೆಯ ಆರೋಗ್ಯ ತಪಾಸಣೆ ನಡೆಸಿದ ಬಳಿಕ ವೈದ್ಯರು ಚಿಕಿತ್ಸೆ ನೀಡಲಿದ್ದಾರೆ. ಬಳಿಕ ಆನೆಯ ಆರೋಗ್ಯದ ಮೇಲ್ವಿಚಾರಣೆ ಮಾಡಿ ಹಿಂದಿರುಗಲಿದ್ದಾರೆ ಎನ್ನಲಾಗಿದೆ.

ಕ್ರೇನ್ ಮೂಲಕ ರಕ್ಷಣೆ: 2 ಅರಿವಳಿಕೆ ಚುಚ್ಚುಮದ್ದು ನೀಡಿದ ನಂತರ ಕಾಡಾನೆ ಪ್ರಜ್ಞೆತಪ್ಪಿ ನಾಲೆಯಲ್ಲೇ ಕುಸಿದುಬಿದ್ದಿತ್ತು. ಬಳಿಕ ಸಿಬ್ಬಂದಿ ನಾಲೆಗೆ ಇಳಿದು ಕಾಡಾನೆಯ ಕಾಲುಗಳಿಗೆ ಬೆಲ್ಟ್ ಕಟ್ಟಿ ಕಬ್ಬಿಣದ ಮ್ಯಾಟ್ ಮೇಲೆ ಮಲಗಿಸಿ ಕ್ರೇನ್ ಮೂಲಕ ನಾಲೆಯಿಂದ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆತ್ತಿದ್ದಾರೆ. ನಾಲೆಗೆ ಬಿದ್ದ ಕಾಡಾನೆ ರಕ್ಷಿಸಿದ ಅರಣ್ಯ ಇಲಾಖೆ ಕಾರ್ಯಾಚರಣೆ ಮೆಚ್ಚುಗೆಗೆ ಪಾತ್ರವಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ