ಆಂದ್ರ ಪ್ರದೇಶದ ಪೂರ್ವ ಗೋದಾವರಿಯ ಪಟಾಕಿ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, 6 ಮಂದಿ ಮೃತಪಟ್ಟಿದ್ದಾರೆ.

ರಾಯವರಂ ಮಂಡಲದ ಕೊಮಾರಿಪಲೇಂ ಗ್ರಾಮದಲ್ಲಿರುವ ಲಕ್ಷ್ಮಿ ಗಣಪತಿ ಪಟಾಕಿ ಘಟಕದಲ್ಲಿ ಈ ಘಟನೆ ಸಂಭವಿಸಿದೆ.

ಬುಧವಾರ ಸಂಭವಿಸಿದ ಭೀಕರ ಅಗ್ನಿ ಅವಘಡದಲ್ಲಿ ಆರು ಮಂದಿ ಮೃತಪಟ್ಟಿದ್ದು, ಎಂಟು ಜನರು ತೀವ್ರ ಗಾಯಗೊಂಡಿದ್ದಾರೆ,ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ‌

ಪಟಾಕಿ ಉತ್ಪಾದನೆಯಲ್ಲಿ ಬಳಸುವ ಹೆಚ್ಚು ದಹಿಸುವ ರಾಸಾಯನಿಕಗಳಿಂದ ಬೆಂಕಿ ವೇಗವಾಗಿ ಹರಡಿದೆ.

ಸ್ಥಳೀಯ ನಿವಾಸಿಗಳು ಅಧಿಕಾರಿಗಳಿಗೆ ಮಾಹಿತಿ ನೀಡಿದ ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ಆರಿಸಿದ್ದಾರೆ.

ಪೊಲೀಸ್, ಕಂದಾಯ ಅಧಿಕಾರಿಗಳು, ತುರ್ತು ಸಿಬ್ಬಂದಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಘಟನೆಯ ಬಗ್ಗೆ ಅಧಿಕಾರಿಗಳೊಂದಿಗೆ ಮಾತನಾಡಿ, ಅಧಿಕಾರಿಗಳಿಗೆ ಖುದ್ದಾಗಿ ಸ್ಥಳಕ್ಕೆ ಭೇಟಿ ನೀಡಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಭಾಗವಹಿಸುವಂತೆ ಸೂಚಿಸಿದ್ದಾರೆ.

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ