ವಿದ್ಯೆ, ವಿವೇಕಕಿಂತಲೂ, ಧರ್ಮವೇ ಹೆಚ್ಚು ಎಂದು ದೇಶ ಮತ್ತು ಧರ್ಮದ ನಡುವಿನ ಅಂತರ ತಿಳಿಯದ 6 ಹೆಣ್ಣು ಮಕ್ಕಳಿಂದಾಗಿ ಇಡೀ ರಾಜ್ಯಕ್ಕೇ ಕೆಟ್ಟ ಹೆಸರು ತರುತ್ತಿರುವ ಈ ಸಂಧರ್ಭದಲ್ಲಿ 9 ದಶಕಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿಯೂ ತನ್ನ ವಿವೇಕ ಕಳೆದುಕೊಳ್ಳದೇ ವಿದ್ಯೆ ಕಲಿತು ಇಡೀ ಸಮಾಜವನ್ನೇ ಬದಲಾಯಿಸಿದಂತಹ ಸಾಮಾಜಿಕ ಜಾಲತಾಣದಲ್ಲಿ ಓದಿದ್ದ ಹೃದಯಸ್ಪರ್ಶಿ ಕಥೆಯೊಂದರ ಭಾವಾನುವಾದವನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.

ಅದು 1943, ಹುಬ್ಬಳ್ಳಿಯ ಮೂಲದ 22 ವರ್ಷದ ಯುವ ವೈದ್ಯರಾಗಿದ್ದ ಡಾ. ಆರ್. ಎಚ್. ಕುಲಕರ್ಣಿಯವರು ಮಹಾರಾಷ್ಟ್ರ-ಕರ್ನಾ
ತಲೆ ಗಟ್ಟಿಗಿದೆ ಎಂದು ಬಂಡೆಗೆ ಚೆಚ್ಚಿಕೊಂಡರೆ ನಮ್ಮ ತಲೆಗೇ ಪೆಟ್ಟಾಗುತ್ತದೆಯೇ ಹೊರತು ಬಂಡೆ ಕಲ್ಲಿಗೆ ಏನೂ ಆಗುವುದಿಲ್ಲ ಎಂಬುದಾಗಿ ಯೋಚಿಸಿದ ಆ ವೈದ್ಯರು. ಸದ್ದಿಲ್ಲದೆ ತಮ್ಮ ಚೀಲವನ್ನು ತೆಗೆದುಕೊಂಡು ಅವರು ತಂದಿದ್ದ ವಾಹನದಲ್ಲಿ ಕುಳಿತುಕೊಳ್ಳುತ್ತಾರೆ, ಹಾಗೆ ಹೋಗುವ ದಾರಿಯಲ್ಲಿ ಭಯದಿಂದಲೇ, ನನ್ನನ್ನು ಎಲ್ಲಿಗೆ ಕರೆದುಕೊಂಡು ಹೋಗುತ್ತಿದ್ದೀರಿ? ಎಂದು ಕೇಳಿದ್ದಕ್ಕೆ ಉತ್ತರ ಸಿಗದಿದ್ದಾಗ ಮೌನವಾಗುತ್ತಾರೆ. ಸುಮಾರು ಒಂದೂವರೆ ಗಂಟೆಗಳ ಸುದೀರ್ಘ ಪಯಣದ ನಂತರ ಆ ವಾಹನ ಒಂದು ಕಡೆ ನಿಂತಾಗ ಆ ಕಡು ಕತ್ತಲೆಯಲ್ಲಿ ಲಾಟೀನಿನ ಬೆಳಕಿನಲ್ಲಿ ವೈದ್ಯರನ್ನು ಒಂದು ಕೋಣೆಗೆ ಕರೆದುಕೊಂಡು ಹೋಗುತ್ತಾರೆ. ಆಲ್ಲೊಂದು ಮಂಚದ ಮೇಲೆ ತುಂಬು ಗರ್ಭಿಣಿಯೊಬ್ಬಳು ಮಲಗಿದ್ದು ಅವರಳ ಆರೈಕೆಗೆಂದು ಆಕೆಯ ಪಕ್ಕದಲ್ಲಿ ಹಣ್ಣು ಹಣ್ಣು ಮುದುಕಿಯೊಬ್ಬರು ಕುಳಿತಿರುತ್ತಾರೆ. ವೈದ್ಯರು ಅಲ್ಲಿನ ಪರಿಸ್ಥಿತಿಯನ್ನು ಮನವರಿಕೆ ಮಾಡುಕೊಳ್ಳುವಷ್ಟರಲ್ಲಿಯೇ ಆ ಅಜ್ಜಿ ವೈದ್ಯರೇ ಹೆರಿಗೆಯ ಬೇನೆಯಿಂದ ಬಹಳ ನರಳುತ್ತಿದ್ದಾಳೆ. ದಯವಿಟ್ಟು ಸುಸೂತ್ರವಾಗಿ ಹೆರಿಗೆ ಮಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಬೇಡಿಕೊಳ್ಳುತ್ತಾಳೆ.

ಆಗಷ್ಟೇ ವೈದ್ಯಕೀಯ ಪದವಿಯನ್ನು ಮುಗಿಸಿ ಕೆಲಸಕ್ಕೆ ಸೇರಿದ್ದ ಕಾರಣ ಅವರು ಎಂದೂ ಹೆರಿಗೆಯನ್ನು ಮಾಡಿಸಿದ ಅನುಭವ ಇಲ್ಲದಿದ್ದರೂ, ನೋವಿನಿಂದ ನರಳುತ್ತಿದ್ದ ಆ ಹುಡುಗಿಯನ್ನು ನೋಡಿ ವೈದ್ಯರ ಮನಸ್ಸು ಕರಗಿ ಆ ಹುಡುಗಿಗೆ ಸಹಾಯ ಮಾಡಲು ನಿರ್ಧರಿಸಿ ಆಕೆಯ ನೋವನ್ನು ಮರೆಸುವ ಸಲುವಾಗಿ ತಂಗೀ, ನೀನು ಯಾರು? ಇಲ್ಲಿಗೆ ಹೇಗೆ ಬಂದೇ ಎಂದು ಕೇಳುತ್ತಾರೆ.





