ಅಪರೂಪದ ಕಾಯಿಲೆಗಳಿಗೆ ಯಶಸ್ವಿ ಚಿಕಿತ್ಸೆ ನೀಡುವಲ್ಲಿ ಸಾಕಷ್ಟು ಖ್ಯಾತಿ ಪಡೆದಿರುವ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆ, ಈಗ ಮತ್ತೊಂದು ಸಾಧನೆ ಮಾಡಿದೆ.

ವಿಲ್ಮ್ಸ್ ಟ್ಯೂಮರ್ ಎಂಬ ಮೂತ್ರಪಿಂಡದ ಕ್ಯಾನ್ಸರ್‌ಗೆ ತುತ್ತಾಗಿ, ಒಂದೇ ಒಂದು ಮೂತ್ರಪಿಂಡದಿಂದ ಜೀವನ ಸಾಗಿಸುತ್ತಿದ್ದ 9 ವರ್ಷದ ಬಾಲಕನಿಗೆ  ಅಸ್ಥಿ ಮಜ್ಜೆ ಕಸಿ/ ಮೂಳೆ ಮಜ್ಜೆಯ ಕಸಿ (ಬಿಎಂಟಿ)ಯನ್ನು ಯಶಸ್ವಿಯಾಗಿ ನಿರ್ವಹಿಸಿದೆ.

ಬಾಲಕನಿಗೆ ಡಿಸೆಂಬರ್ 2022 ರಲ್ಲಿ ವಿಲ್ಮ್ಸ್ ಟ್ಯೂಮರ್ ಇರುವುದು ಪತ್ತೆಯಾಗಿತ್ತು. ಕೀಮೋಥೆರಪಿ ಚಿಕಿತ್ಸೆ ನೀಡಿ ಎಡ ಮೂತ್ರಪಿಂಡಕ್ಕೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ನಂತರ ರೇಡಿಯೇಷನ್ ಚಿಕಿತ್ಸೆ ನೀಡಲಾಯಿತು. ದುರದೃಷ್ಟವಶಾತ್, ಏಪ್ರಿಲ್ 2025 ರಲ್ಲಿ ಮರುಕಳಿಸಿತು. ಆಗ ಅವನು ಬದುಕುಳಿಯುವ ಅತ್ಯುತ್ತಮ ಅವಕಾಶವೆಂದರೆ ಹೆಚ್ಚಿನ ಪ್ರಮಾಣದ ಕೀಮೋಥೆರಪಿ ಮತ್ತು ನಂತರ ಸ್ಟೆಮ್ ಸೆಲ್ ಟ್ರಾನ್ಸ್‌ಪ್ಲಾಂಟೇಶನ್ ಎಂದು ಕಿದ್ವಾಯಿ ವೈದ್ಯರು ತೀರ್ಮಾನಿಸಿದರು.ಕಿದ್ವಾಯಿ ಆಸ್ಪತ್ರೆಯ ವೈದ್ಯರಾದ ಡಾ. ವಸುಂಧರಾ ಕೈಲಾಸನಾಥ್, ಬಿಎಂಟಿ – ಸಹ ಪ್ರಾಧ್ಯಾಪಕರು ಮತ್ತು ಅವರ ತಂಡವು ಬಿಎಂಟಿ ಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿತು. ಚಿಕ್ಕ ವಯಸ್ಸಿನಲ್ಲಿಯೇ ಕೀಮೊಥೆರಪಿ ಚಿಕಿತ್ಸೆ ನೀಡಿದ್ದರಿಂದ, ಹೆಚ್ಚಿನ ಪ್ರಮಾಣದ ಬಿಎಂಟಿ ಔಷಧಿಗಳ ಅಗತ್ಯತೆ ಮತ್ತು ತೀವ್ರವಾದ, ಕಾಯಿಲೆಯಿಂದ ಜೀವಕ್ಕೆ ಅಪಾಯಕಾರಿಯಾಗಿತ್ತು. ಈ ನಿಟ್ಟಿನಲ್ಲಿ ಈ ಚಿಕಿತ್ಸೆ ವಿಶೇಷವಾಗಿತ್ತು ಹಾಗೂ ಸವಾಲಿನಿಂದ ಕೂಡಿತ್ತು ಎಂದು ಡಾ. ವಸುಂಧರಾ ತಿಳಿಸಿದ್ದಾರೆ.

ಕಳೆದ ಮೂರು ವರ್ಷಗಳಲ್ಲಿ ಇಲ್ಲಿಯವರೆಗೆ 130 ಬಿಎಂಟಿ ಚಿಕಿತ್ಸೆಯನ್ನು  ಯಶಸ್ವಿಯಾಗಿ ಪೂರ್ಣಗೊಳಿಸಿದೆ ಎಂದು ಕಿದ್ವಾಯಿ ಆಸ್ಪತ್ರೆಯ  ನಿರ್ದೇಶಕ ಡಾ. ನವೀನ್. ಟಿ ತಿಳಿಸಿದ್ದಾರೆ.

ಬಾಲಕನಿಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಿರುವ  ವೈದ್ಯರ ತಂಡವನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್ ಅಭಿನಂದಿಸಿದ್ದಾರೆ.

ವಿಶೇಷ ಪರವಾನಗಿ: ಬಿಎಂಟಿ ಸೇವೆಗಳಿಗಾಗಿ ಹೋಟಾ (ಮಾನವ ಅಂಗಗಳು ಮತ್ತು ಅಂಗಾಂಶಗಳ ಕಸಿ ಕಾಯ್ದೆ, 1994) ಪರವಾನಗಿಯನ್ನು ಪಡೆಯುವ ಮೂಲಕ ಕಿದ್ವಾಯಿ ಸಂಸ್ಥೆ ಮತ್ತೊಂದು ಸಾಧನೆ ಮಾಡಿದೆ. ಈ ಪ್ರಮಾಣ ಪತ್ರವನ್ನು ಪಡೆದ ಕರ್ನಾಟಕದ ಕೆಲವೇ ಆಸ್ಪತ್ರೆಗಳಲ್ಲಿ ಕಿದ್ವಾಯಿ ಕೂಡ ಒಂದು. ಸಂಸ್ಥೆಯ ನಿರ್ದೇಶಕರಾದ  ಡಾ. ನವೀನ್ .ಟಿಗೆ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಪ್ರಮಾಣ ಪತ್ರವನ್ನು ಔಪಚಾರಿಕವಾಗಿ ಹಸ್ತಾಂತರಿಸಿದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ