ಅದೊಂದು ಆಹ್ಲಾದಕರ ಸಂಜೆ. ದೆಹಲಿಯ ವೈಭವೋಪೇತ ಕನ್ವೆನ್ಷನ್ ಸೆಂಟರ್. ಕ್ಯಾಮೆರಾಗಳ ಜಗಮಗಿಸುವ ಬೆಳಕು ಎಲ್ಲೆಡೆ ಬೀಳುತ್ತಿತ್ತು. ಭದ್ರತಾ ಅಧಿಕಾರಿಗಳು ತಮ್ಮ ವಾಕಿ-ಟಾಕಿ ಯಲ್ಲಿ ಮಾತನಾಡುತ್ತಿದ್ದರು. ಸೂಟು ಧರಿಸಿದ್ದ ಜನರ ಸಂಭ್ರಮವೋ ಸಂಭ್ರಮ. ಮಂತ್ರಿಗಳು, ಗಣ್ಯರು, ಉದ್ಯೋಗಪತಿಗಳು ಹಾಗೂ ವಿದೇಶಿ ಅತಿಥಿಗಳಿಂದ ಸಭಾಂಗಣ ತುಂಬಿಹೋಗಿತ್ತು. ಮೊದಲ ಸಾಲಿನಲ್ಲಿ ದೇಶದ ಪ್ರತಿಷ್ಠಿತ ವ್ಯಕ್ತಿಗಳು ಆಸೀನರಾಗಿದ್ದರು. ಮೂರನೇ ಸಾಲಿನ ಒಂದು ಮೂಲೆಯಲ್ಲಿ, ಸಾಧಾರಣ ಹತ್ತಿಯ ನೂಲಿನ ಸೀರೆಯುಟ್ಟ, ಸ್ವಲ್ಪ ವಯಸ್ಸಾದ, ಮಹಿಳೆಯೊಬ್ಬರು ಕುಳಿತಿದ್ದರು. ಅವರು ಕ್ಯಾಮರಾಗಳ ಗಮನ ಸೆಳೆಯುವಷ್ಟು ಆಕರ್ಷಕವಾಗಿ ಇರಲಿಲ್ಲ ! ಅವರೇ ಲಕ್ಷ್ಮಿ ಪಿಚಾಯಿ.
ಅವರು ಯಾರು ಎಂಬುದು ಗೊತ್ತಿದ್ದವರು ಕೆಲವರು ಮಾತ್ರ. ಸ್ಪಾಟ್ ಲೈಟ್ ಬೀಳುತ್ತಿದ್ದುದು ಆಕೆಯ ಮಗ, ವಿಶ್ವದ ದೈತ್ಯ ಸಾಫ್ಟ್ ವೇರ್ ಸಂಸ್ಥೆ ಗೂಗಲ್ ನ CEO ಆದ, ಭಾರತದ ಹೆಮ್ಮೆಯ - ಸುಂದರ ಪಿಚಾಯಿ ಮೇಲೆ !
ಸುಂದರ ಪಿಚಾಯಿ, ಇವರೇ ಅನೇಕ ಕಠಿಣಾತಿಕಠಿಣ ಪರೀಕ್ಷೆಗಳನ್ನು ಎದುರಿಸಿ, ಗೆದ್ದು, ಈ ಅತ್ಯುಚ್ಛ ಸ್ಥಾನವನ್ನು ಗಳಿಸಿದಾತ.
ಅಂದು ಭಾರತ ಸರ್ಕಾರವು ಈ ಮಾತೃಭೂಮಿ ಮಗನನ್ನು ಸತ್ಕರಿಸುವ ಸಮಾರಂಭವನ್ನು ಏರ್ಪಡಿಸಿತ್ತು !
ಸುಂದರ ಪಿಚಾಯಿ ತನ್ನ ತಾಯಿಯ ಕಡೆ ಗಮನ ಹರಿಸುತ್ತಿದ್ದರು. ಆದರೆ ಆಕೆಗೆ ಅದು ಇಷ್ಟವಾಗುವಂತೆ ಕಾಣುತ್ತಿರಲಿಲ್ಲ.
ಪ್ರಧಾನಿ ನರೇಂದ್ರ ಮೋದಿ ವೇದಿಕೆಗೆ ಏರಿದಾಗ ಅಬ್ಬರದ ಜಯಘೋಷ ಕೇಳಿ ಬಂತು. ಅವರ ಮಾತುಗಳು ಅತ್ಯಂತ ಪ್ರಭಾವಶಾಲಿ ಆಗಿದ್ದವು. ಅವರ ಮಾತುಗಳು ನಿಷ್ಠೆ, ಕನಸುಗಳು, ಹೋರಾಟ ಮತ್ತು ಆಳವಾದ ಮೌಲ್ಯಗಳನ್ನು ಪ್ರತಿಪಾದಿಸುತ್ತಿದ್ದವು. ಅವರು ತಮ್ಮ ಮಾತಿನಲ್ಲಿ ಸಭೆಯಲ್ಲಿ ಉಪಸ್ಥಿತರಿದ್ದ ವಿಜ್ಞಾನಿಗಳು, ಕಲಾವಿದರು, ಉದ್ಯೋಗ ಪತಿಗಳು ಮುಂತಾದವರ ಹೆಸರನ್ನು ಉಲ್ಲೇಖಿಸಿದರು. ಕಡೆಗೆ ಅವರ ಧ್ವನಿ ಸ್ವಲ್ಪ ಮೆತ್ತಗಾಯಿತು. ಅವರು ಹೇಳಿದರು
"ನಾವು ಈ ದಿನ ಕೇವಲ ಸುಂದರ ಪಿಚಾಯಿ ಅವರನ್ನು ಗೌರವಿಸುತ್ತಿಲ್ಲ. ಮಗನ ಅಧ್ಯಯನಕ್ಕಾಗಿ ತನ್ನ ಊಟವನ್ನು ತ್ಯಾಗ ಮಾಡಿದ ಮಹಾತಾಯಿ ಒಬ್ಬಳ ಜೀವನ ಪ್ರಯಾಣವನ್ನೂ ಗೌರವಿಸುತ್ತಿದ್ದೇವೆ"
ಸುಂದರ ಪಿಚಾಯಿಯ ಹೃದಯದ ಬಡಿತ ಈ ಮಾತನ್ನು ಕೇಳಿ ಹೆಚ್ಚಾಯಿತು. ಅವರು ಎಂದೂ ಸಾರ್ವಜನಿಕವಾಗಿ ಈ ವಿಷಯವನ್ನು ಹೇಳಿರಲಿಲ್ಲ. ತಕ್ಷಣ ನೆರದಿದ್ದ ಸಭಿಕರಲ್ಲಿ ಗುಸು-ಗುಸು ಆರಂಭವಾಯಿತು. ಕ್ಯಾಮೆರಾ ಗಳು ಈ ಕ್ಷಣವನ್ನು ಸೆರೆಹಿಡಿಯಲು ಅತ್ತ ತಿರುಗಿದವು. ಸಭಿಕರು ಮೌನವಾಗಿ ನೋಡತೊಡಗಿದರು.
ಮೋದಿಯವರು ವೇದಿಕೆಯ ಮೆಟ್ಟಿಲನ್ನು ಇಳಿಯ ತೊಡಗಿದರು. ಅವರು ನೇರವಾಗಿ ಸುಂದರ ಪಿಚಾಯಿ ಕಡೆ ಹೋಗಲಿಲ್ಲ ! ಅದಕ್ಕೆ ಬದಲಾಗಿ ಮೂರನೇ ಸಾಲಿನಲ್ಲಿ ತಣ್ಣಗೆ ಕುಳಿತಿದ್ದ ಅವರ ತಾಯಿಯ ಕಡೆ ಹೆಜ್ಜೆ ಹಾಕಿದರು.
ಲಕ್ಷ್ಮಿ ಅವರಿಗೆ ಒಂದು ಕ್ಷಣ ದಿಗ್ ಭ್ರಮೆ ಉಂಟಾಯಿತು. ನಮಸ್ಕರಿಸಲೆಂದು ಎತ್ತಿದ ಕೈಗಳು ನಡುಗುತ್ತಿದ್ದವು ! ನೋಡುತ್ತಿದ್ದವರು ಒಂದು ಕ್ಷಣ ಉಸಿರಾಟವನ್ನೇ ನಿಲ್ಲಿಸಿಬಿಟ್ಟರು !
ಮೋದಿಯವರು ಮೆಲ್ಲನೆ ಹೇಳಿದರು "ಕೇವಲ ನಿಮ್ಮ ತ್ಯಾಗದಿಂದ ಅಷ್ಟೇ ಇದು ಸಾಧ್ಯವಾಯಿತು".
ಇಷ್ಟು ಹೇಳಿದ ಮೋದಿ ತಲೆತಗ್ಗಿಸಿ ಲಕ್ಷ್ಮಿ ಅವರ ಪಾದಗಳಿಗೆ ನಮಸ್ಕರಿಸಿದರು ! ಇಡೀ ಸಭಾಂಗಣದಲ್ಲಿ ನೆರೆದಿದ್ದ ಜನ ನಿಶಬ್ದವಾಗಿ ಮೇಲೆದ್ದು ಈ ಗೌರವಾರ್ಪಣೆಯಲ್ಲಿ ಭಾಗಿಯಾದರು. ಈ ದೃಶ್ಯವನ್ನು ತೆರೆಹಿಡಿಯಲು ಅಲ್ಲಿದ್ದ ಕ್ಯಾಮೆರಾಗಳೆಲ್ಲವೂ ಚುರುಕಾದವು.





