ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂಪುಟದ ನೂತನ ಸಚಿವರಿಗೆ ಬುಧವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದ್ದು, ಅಧಿಕೃತ ಖಾತೆ ಹಂಚಿಕೆ ಪಟ್ಟಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಹಿ ಹಾಕಿದ್ದಾರೆ.

ಸಚಿವ ಕೆ.ಎಚ್. ಮುನಿಯಪ್ಪ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರ ಖಾತೆಯನ್ನು ಬದಲಾಯಿಸಲಾಗಿದೆ. ಈ ಮುಂಚೆ ಮುನಿಯಪ್ಪ ಅವರಿಗೆ ಆಹಾರ ಖಾತೆ ನೀಡಲಾಗಿತ್ತು. ಆದರೆ ಈ ಬಾರಿ ಸಮಾಜ ಕಲ್ಯಾಣ ಇಲಾಖೆಯನ್ನು ನೀಡಲಾಗಿದೆ.

ಇನ್ನು ಜಲಸಂಪನ್ಮೂಲ ಖಾತೆ ನೀಡಿದ್ದಕ್ಕೆ ತೀವ್ರ ಅಸಮಾಧಾನಗೊಂಡಿದ್ದ ರಾಮಲಿಂಗಾರೆಡ್ಡಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಹಂತಕ್ಕೆ ಹೋಗಿದ್ದರು. ಆದರೆ ಇದೀಗ ಅವರಿಗೆ ಅರಣ್ಯ ಖಾತೆ ನೀಡಲಾಗಿದೆ.

ಯಾರಿಗೆ ಯಾವ ಖಾತೆ?

ಲಕ್ಷ್ಮಣ ಸವದಿ- ಸಹಕಾರ ಇಲಾಖೆ

ರಾಮಲಿಂಗರೆಡ್ಡಿ-ಅರಣ್ಯ

ಕೆ.ಹೆಚ್.ಮುನಿಯಪ್ಪ-ಸಮಾಜ ಕಲ್ಯಾಣ ಇಲಾಖೆ

ಸಂತೋಷ್ ಲಾಡ್- ಕಾರ್ಮಿಕ ಇಲಾಖೆ

ಯು.ಟಿ.ಖಾದರ್-ಆರೋಗ್ಯ ಮತ್ತು ಕಲ್ಯಾಣ ಇಲಾಖೆ, ವಕ್ಫ್

ಶಿವರಾಜ್ ತಂಗಡಗಿ- ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ

ಬಸವರಾಜ ರಾಯರೆಡ್ಡಿ-ಉನ್ನತ ಶಿಕ್ಷಣ

ಎಚ್‌.ಸಿ.ಬಾಲಕೃಷ್ಣ-ಪೌರಾಡಳಿತ

ಕೆ.ಎಸ್‌.ಬಸವಂತಪ್ಪ-ಮುಜರಾಯಿ, ಮೀನುಗಾರಿಕೆ

ಎನ್‌.ಚಲುವರಾಯಸ್ವಾಮಿ- ಜಲಸಂಪನ್ಮೂಲ ಇಲಾಖೆ

ಮಧು ಬಂಗಾರಪ್ಪ- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ

ಎಸ್‌.ಎಸ್‌.ಮಲ್ಲಿಕಾರ್ಜುನ್‌- ಗಣಿ ಮತ್ತು ಭೂವಿಜ್ಞಾನ ಇಲಾಖೆ

ಬಿ.ನಾಗೇಂದ್ರ-ಯೋಜನೆ ಮತ್ತು ಸಾಂಖ್ಯಿಕ ಇಲಾಖೆ

ಪಿ.ಎಂ.ನರೇಂದ್ರಸ್ವಾಮಿ-ಕೃಷಿ ಇಲಾಖೆ

ಸಿ.ಪುಟ್ಟರಂಗಶೆಟ್ಟಿ-ಪಶು ಸಂಗೋಪನಾ ಇಲಾಖೆ, ರೇಷ್ಮೆ

ಟಿ.ರಘುಮೂರ್ತಿ-ಪರಿಶಿಷ್ಟ ಪಂಗಡ ಕಲ್ಯಾಣ ಖಾತೆ

ರಿಜ್ವಾನ್‌ ಅರ್ಷದ್‌-ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ

ರುದ್ರಪ್ಪ ಲಮಾಣಿ- ಸಕ್ಕರೆ ಮತ್ತು ಜವಳಿ

ಶಿವಲಿಂಗೇಗೌಡ-ಅಬಕಾರಿ ಖಾತೆ

ವಿಜಯಾನಂದ ಕಾಶಪ್ಪನವರ್‌-ಸಣ್ಣ ಕೈಗಾರಿಕೆ

ಜಮೀರ್‌ ಅಹ್ಮದ್‌ ಖಾನ್-ವಸತಿ

ಅಜಯ್ ಸಿಂಗ್-ಸಣ್ಣ ನೀರಾವರಿ, ಐಟಿ ಬಿಟಿ

ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ