ದೇಶದಲ್ಲಿ ಇತ್ತೀಚಿನ ವರ್ಷಗಳಲ್ಲಿ ಸಂಭವಿಸಿದ ಭಾರೀ ಭೀಕರ ವಿಮಾನ ಪತನ ಗುಜರಾತ್ನಲ್ಲಿ ಸಂಭವಿಸಿದೆ. ವಿಮಾನ ಅತ್ಯಂತ ಭೀಕರವಾಗಿ ಅಪಘಾತಕ್ಕೆ ಒಳಗಾಗಿದ್ದು ಈ ವಿಮಾನದಲ್ಲಿ 242 ಜನ ಪ್ರಯಾಣಿಸುತ್ತಿದ್ದರು. ವಿಮಾನ ಪತನವು ಜನನಿಬಿಡ ಪ್ರದೇಶದಲ್ಲಿ ಆಗಿರುವುದರಿಂದ ಸಾವು - ನೋವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದಾಗಿ ಇಲ್ಲಿಯ ರಕ್ಷಣಾ ಕಾರ್ಯಾಚರಣೆ ಕಷ್ಟವಾಗುತ್ತಿದೆ ಎಂದು ಹೇಳಲಾಗುತ್ತಿದೆ. ಕಟ್ಟಡದ ಮೇಲೆ ವಿಮಾನ ಪತನವಾಗಿರುವುದರಿಂದ ವಿಮಾನದಲ್ಲಿ ಇದ್ದವರು ಮಾತ್ರವಲ್ಲ. ಕಟ್ಟಡಗಳಲ್ಲಿ ಇದ್ದವರೂ ಮೃತಪಟ್ಟಿದ್ದಾರೆ ಎನ್ನಲಾಗುತ್ತಿದೆ.ಅಹಮದಾಬಾದ್ ಏರ್ಪೋರ್ಟ್ನಿಂದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಐದು ನಿಮಿಷದಲ್ಲಿ ಮೇಘನಿನಗರ್ನಲ್ಲಿ ಪತನಗೊಂಡಿದೆ. ವಿಮಾನದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ ಒಟ್ಟು 242 ಪ್ರಯಾಣಿಕರಿದ್ದರು. ಅವರಲ್ಲಿ 230 ಪ್ರಯಾಣಿಕರು, 12 ಮಂದಿ ಸಿಬ್ಬಂದಿಯಿದ್ದರು. 242 ಪ್ರಯಾಣಿಕರಲ್ಲಿ 169 ಭಾರತೀಯರು, 53 ಬ್ರಿಟಿಷ್, ಒಬ್ಬ ಕೆನಡಾ, ಪೋರ್ಚುಗಿಸ್ ಪ್ರಜೆಗಳು ವಿಮಾನದಲ್ಲಿದ್ದರು ಎನ್ನಲಾಗಿದೆ.
ಜಗತ್ತೇ ಬೆಚ್ಚಿ ಬೀಳುವ ಘಟನೆ ಪ್ರಧಾನಿ ಮೋದಿ ಅವರ ತವರು ಗುಜರಾತ್ ರಾಜ್ಯದ ಅಹಮದಾಬಾದ್ ನಗರದಲ್ಲಿ ಗುರುವಾರ ಸಂಭವಿಸಿದೆ. ಇದು ಭಾರತದ ಇತಿಹಾಸದಲ್ಲೇ ಅಹಮದಾಬಾದ್ ವಿಮಾನ ನಿಲ್ದಾಣದಲ್ಲಿ ಸಂಭವಿಸಿದ ಭೀಕರ ವಿಮಾನ ದುರಂತ. ಈ ಸುದ್ದಿಯಿಂದ ಶತಕೋಟಿ ಭಾರತೀಯರು ಬೆಚ್ಚಿಬಿದ್ದಿದ್ದಾರೆ. ಇನ್ನೂ ಈ 58,000 ಲೀಟರ್ ಪೆಟ್ರೋಲ್ ಹೊಂದಿದ್ದ ವಿಮಾನ ದಿಢೀರ್ ಬಿಲ್ಡಿಂಗ್ ಮೇಲೆ ಬಿದ್ದಿದ್ದಾರೂ ಹೇಗೆ ಎಂಬ ಪ್ರಶ್ನೆ ಎಲ್ಲರಲ್ಲೂ ಮನೆಮಾಡಿದೆ.
242 ಜನರನ್ನು ಹೊತ್ತ ಏರ್ ಇಂಡಿಯಾ ವಿಮಾನ ಗುಜರಾತ್ ರಾಜ್ಯದ ಅಹಮದಾಬಾದ್ ನಗರದ ಏರ್ಪೋರ್ಟ್ ಮೂಲಕ ಲಂಡನ್ ಕಡೆಗೆ ಪ್ರಯಾಣ ಬೆಳೆಸಿತ್ತು. ಆದರೆ ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ನಿಯಂತ್ರಣ ಕಳೆದುಕೊಂಡ ಏರ್ ಇಂಡಿಯಾ ವಿಮಾನ ಗಾಳಿಯಲ್ಲಿ ತೇಲುತ್ತಾ, ಅಲ್ಲಾಡಿ ಹೋಗಿದೆ. ನೋಡ ನೋಡುತ್ತಲೇ ಈ ವಿಮಾನವನ್ನು ಎಮರ್ಜೆನ್ಸಿ ಲ್ಯಾಂಡಿಂಗ್ ಮಾಡಲು ಪೈಲೆಟ್ ಮುಂದಾಗಿದ್ದಾರೆ.
ಲಂಡನ್ ಕಡೆಗೆ ಪ್ರಯಾಣ ಬೆಳೆಸುವ ವಿಮಾನಕ್ಕೆ ಹೆಚ್ಚಿನ ಪ್ರಮಾಣದಲ್ಲಿ ಇಂಧನ ಅಗತ್ಯವಿರುತ್ತದೆ. ಹೀಗಾಗಿ ಸುಮಾರು 58,000 ಲೀಟರ್ ಪೆಟ್ರೋಲ್ ತುಂಬಿಸಲಾಗಿತ್ತು. ಆದರೆ ಇಷ್ಟೊಂದು ಭಾರಿ ಪ್ರಮಾಣದಲ್ಲಿ ವೈಟ್ ಪೆಟ್ರೋಲ್ ಅಥವಾ ಶ್ವೇತ ಇಂಧನ ತುಂಬಿಸಿದ್ದ ಏರ್ ಇಂಡಿಯಾದ ಲಂಡನ್ ವಿಮಾನ ಕೆಳಗೆ ಬಿದ್ದು ಬ್ಲಾಸ್ಟ್ ಆಗಿದೆ.
ಇಂದು ಸಂಭವಿಸಿದ ಭೀಕರ ವಿಮಾನ ಅಪಘಾತಕ್ಕೆ ಸ್ಪಷ್ಟ ಕಾರಣ ಇನ್ನೂ ಸ್ಪಷ್ಟ ಕಾರಣ ತಿಳಿದುಬಂದಿಲ್ಲ. ಆದರೆ ತಾಂತ್ರಿಕ ದೋಷ ಹಿನ್ನೆಲೆ ವಿಮಾನ ಕೆಲವು ವಾರಗಳ ಹಿಂದಷ್ಟೇ ರಿಪೇರಿ ಕೂಡ ಆಗಿತ್ತು ಎಂಬ ಮಾಹಿತಿ ಇದೆ. ಇದರ ಜೊತೆಗೆ ವಿಮಾನದಲ್ಲಿ ಭಾರಿ ಪ್ರಮಾಣದ ಪೆಟ್ರೋಲ್ ಇದ್ದ ಕಾರಣ ಇದೀಗ ದೊಡ್ಡ ಸ್ಫೋಟ ಸಂಭವಿಸಿ, ಜೀವ ಹಾನಿ ಕೂಡ ದೊಡ್ಡ ಮಟ್ಟದಲ್ಲೇ ಆಗಿದೆ ಎನ್ನಲಾಗುತ್ತಿದೆ. ತನಿಖೆ ಆರಂಭವಾಗಿ, ಅಧಿಕಾರಿಗಳು ಕೂಡ ಸಾಕ್ಷ್ಯ ಸಂಗ್ರಹ ಮಾಡುತ್ತಿದ್ದಾರೆ. ಮತ್ತೊಂದು ಕಡೆ ವಿಮಾನದಲ್ಲಿ ಇದ್ದ 58,000 ಲೀಟರ್ ಪೆಟ್ರೋಲ್ ಒಂದೇ ಸಮಯಕ್ಕೆ ಹೊತ್ತಿ ಉರಿದ ಪರಿಣಾಮ ಜೀವಹಾನಿ ಮತ್ತಷ್ಟು ಹೆಚ್ಚಾಗಿರುವ ಆರೋಪ ಕೂಡ ಕೇಳಿ ಬಂದಿದೆ. ಸಂಪೂರ್ಣ ತನಿಖೆ ನಂತರವೇ ಸ್ಪಷ್ಟ ಕಾರಣ ತಿಳಿಯುವ ಸಾಧ್ಯತೆ ಇದೆ.
ಅಲ್ಲಿನ ಪೊಲೀಸ್ ಆಯುಕ್ತ GS ಮಲಿಕ್ ನೀಡಿದ ಮಾಹಿತಿ ಪ್ರಕಾರ, ವಿಮಾನ ಅಪಘಾತದಲ್ಲಿ ಯಾರೂ ಬದುಕುಳಿದಿಲ್ಲ. ವಿಮಾನವು ವಸತಿ ಪ್ರದೇಶದಲ್ಲಿ ಪತನಗೊಂಡ ಕಾರಣ ಕೆಲವು ಸ್ಥಳೀಯರೂ ಜೀವ ಕಳೆದುಕೊಂಡಿದ್ದಾರೆ. ಆದಾಗ್ಯೂ ಒಬ್ಬ ವ್ಯಕ್ತಿ ಬದುಕುಳಿದಿದ್ದಾನೆ ಎಂದು ಹೇಳಲಾಗುತ್ತಿದೆ. ಸದ್ಯ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.