ಇಂದು ಮಧ್ಯಾಹ್ನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿ ಏರ್ ಇಂಡಿಯಾ ವಿಮಾನ ಪತನವಾಗಿದೆ. ವಿಮಾನ ಟೇಕ್ ಆಫ್ ಆದ ಕೆಲವೇ ನಿಮಿಷದಲ್ಲಿ ವಿಮಾನ ಅಪಘಾತಕ್ಕೀಡಾಗಿದೆ. ಟೇಕ್ ಆಫ್ ಆದ 5 ನಿಮಿಷದಲ್ಲಿ ವಿಮಾನದ ಸಿಗ್ನಲ್ ಕಡಿತಗೊಂಡಿತು. ಬಳಿಕ ವಿಮಾನ ಪತನವಾಗಿದ್ದು, ಆಕಾಶದ ತುಂಬ ದಟ್ಟ ಹೊಗೆ ಆವರಿಸಿಕೊಂಡಿತ್ತು. ಬೆಂಕಿ ಬೇಗ ಹರಡಿತು, ಯಾರನ್ನೂ ಉಳಿಸಲಾಗಲಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಏರ್ ಇಂಡಿಯಾ ವಿಮಾನವು ಸುಮಾರು 60,000 ಲೀಟರ್ ಇಂಧನವನ್ನು ಹೊತ್ತೊಯ್ದಿತ್ತು. ಬೆಂಕಿ ಹೊತ್ತಿ ಉರಿದಾಗ ಆ ಇಂಧನದಿಂದಾಗಿ ಬೆಂಕಿ ಇನ್ನಷ್ಟು ವ್ಯಾಪಕವಾಗಿ ಹರಡಿದೆ. ಹೆಚ್ಚಿನ ತಾಪಮಾನದಿಂದಾಗಿ ಯಾರನ್ನೂ ಉಳಿಸುವ ಅವಕಾಶವಿರಲಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

ಅಹಮದಾಬಾದ್​​ನಲ್ಲಿ ಗಾಯಾಳುಗಳನ್ನು ಭೇಟಿಯಾದ ಅಮಿತ್ ಶಾ, ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ AI171 ದುರಂತದ ನಂತರ ಇಡೀ ದೇಶವು ಶೋಕದಲ್ಲಿದೆ ಎಂದಿರುವ ಅಮಿತ್ ಶಾ, ಪ್ರಾಣಹಾನಿಗೆ ತೀವ್ರ ದುಃಖ ವ್ಯಕ್ತಪಡಿಸಿದ್ದಾರೆ. ಸರ್ಕಾರವು ಮೃತರ ಕುಟುಂಬಗಳೊಂದಿಗೆ ದೃಢವಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ.

 

ತನಿಖೆಗೆ ಸಹಾಯ: ಅಹಮದಾಬಾದ್ ವಿಮಾನ ಅಪಘಾತಕ್ಕೆ ಸಂಬಂಧಿಸಿದಂತೆ ತನಿಖೆಗೆ ಸಹಾಯ ಮಾಡಲು ಅಮೆರಿಕ, ಯುಕೆ ಭಾರತಕ್ಕೆ ತಂಡಗಳನ್ನು ಕಳುಹಿಸಲಿವೆ. ಏರ್ ಇಂಡಿಯಾದ ವಿಶೇಷ ತಂಡ ಕೂಡ ಅಹಮದಾಬಾದ್‌ಗೆ ಆಗಮಿಸಿದೆ.

ಏರ್ ಇಂಡಿಯಾ ಸಿಇಒ ಪ್ರತಿಕ್ರಿಯೆ: “ಈ ಘಟನೆಯ ಬಗ್ಗೆ ತೀವ್ರ ದುಃಖ ವ್ಯಕ್ತಪಡಿಸಲು ನಾನು ಬಯಸುತ್ತೇನೆ. ಏರ್ ಇಂಡಿಯಾದಲ್ಲಿ ನಮಗೆಲ್ಲರಿಗೂ ಇದು ಕಷ್ಟಕರವಾದ ದಿನವಾಗಿದೆ. ನಮ್ಮ ಪ್ರಯತ್ನಗಳು ನಮ್ಮ ಪ್ರಯಾಣಿಕರು, ಸಿಬ್ಬಂದಿ ಸದಸ್ಯರು, ಅವರ ಕುಟುಂಬಗಳು ಮತ್ತು ಪ್ರೀತಿಪಾತ್ರರ ಅಗತ್ಯಗಳ ಮೇಲೆ ಕೇಂದ್ರೀಕೃತವಾಗಿವೆ” ಎಂದು ಏರ್ ಇಂಡಿಯಾ ಸಿಇಒ ಕ್ಯಾಂಪ್‌ಬೆಲ್ ವಿಲ್ಸನ್ ಅಹಮದಾಬಾದ್ ವಿಮಾನ ಅಪಘಾತದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಗಳಲ್ಲಿ ಏರ್ ಇಂಡಿಯಾ ವಿಮಾನಯಾನ ಸಂಸ್ಥೆಯು ಅಧಿಕಾರಿಗಳೊಂದಿಗೆ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಅವರು ಹೇಳಿದ್ದಾರೆ. ಹಾಸ್ಟೆಲ್ಗೆ ಡಿಕ್ಕಿ: ಅಹಮದಾಬಾದ್​ ವಿಮಾನ ನಿಲ್ದಾಣದಿಂದ ಟೇಕಾಫ್ ಆದ ವಿಮಾನ ಪಕ್ಕದ ವೈದ್ಯರ ಹಾಸ್ಟೆಲ್​ಗೆ ಡಿಕ್ಕಿ ಹೊಡೆದಿತ್ತು. ಈ ಹಾಸ್ಟೆಲ್​​ನಲ್ಲಿದ್ದ 50-60 ವೈದ್ಯಕೀಯ ವಿದ್ಯಾರ್ಥಿಗಳಿಗೆ ಇದರಿಂದ ತೀವ್ರ ಪೆಟ್ಟಾಗಿದೆ. ಅವರಲ್ಲಿ ಮೂವರು ವೈದ್ಯಕೀಯ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎನ್ನಲಾಗಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ