ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಕಳೆದ ಒಂದು ವರ್ಷದಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರನ್ಯಾ ರಾವ್​​​ಗೆ ಆರ್ಥಿಕ ಅಪರಾಧಗಳ ತಡೆ ನ್ಯಾಯಾಲಯ ಜಾಮೀನು ನೀಡಿದೆ.

2025 ಮಾರ್ಚ್ 3ರಂದು ನಟಿ ರನ್ಯಾ ರಾವ್ 14.8 ಕೆಜಿ ಚಿನ್ನದ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡಿಆರ್​ಐ ಕೈಯಲ್ಲಿ ಲಾಕ್ ಆಗಿದ್ದರು.

ಪ್ರಕರಣ ಸಂಬಂಧ ಹೈಕೋರ್ಟ್ ಏಕಸದಸ್ಯ ಪೀಠ ಜಾಮೀನು ಅರ್ಜಿ ವಜಾ ಮಾಡಿತ್ತು. ಹೀಗಾಗಿ ರನ್ಯಾ ರಾವ್​ಗೆ ಒಂದು ವರ್ಷ ಜಾಮೀನು ಸಿಕ್ಕಿರಲಿಲ್ಲ.

ತನಿಖೆ ವೇಳೆ ಆಭರಣ ವ್ಯಾಪಾರಿ ಸಾಹಿಲ್ ಜೈನ್ ಸಹ ಈ ಜಾಲದಲ್ಲಿದ್ದು, ಸುಮಾರು 40 ಕೋಟಿ ರೂ. ಮೌಲ್ಯದ ಸುಮಾರು 49 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮೂಲಕ ಮಾರಾಟ ಮಾಡಲು ರನ್ಯಾಗೆ ನೆರವಾಗಿದ್ದಾರೆ ಎನ್ನಲಾಗಿದೆ. ಅಲ್ಲದೇ ದೊಡ್ಡ ಮಟ್ಟದ ಹವಾಲಾ ವಹಿವಾಟು ನಡೆಸಿದ್ದು, ಕಮಿಷನ್ ಕೂಡಾ ಪಡೆದಿದ್ದರು ಎಂಬುದು ವಿಚಾರಣೆ ವೇಳೆ ತಿಳಿದುಬಂದಿದೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ