ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನದ ಎರಡನೇ ದಿನವಾದ ಶುಕ್ರವಾರ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆನಡೆದ ಚುನಾವಣೆಯಲ್ಲಿ ಸಲೀಂ ಅಹ್ಮದ್ ಆಯ್ಕೆಯಾಗಿದ್ದಾರೆ.

ಧ್ವನಿಮತದ ಮೂಲಕ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಸಲೀಂ ಅಹ್ಮದ್ ಪರವಾಗಿ 38 ಮತಗಳು ಚಲಾವಣೆಯಾದರೆ, ಪಿ.ಎಚ್.ಪೂಜಾರ್ ಪರವಾಗಿ 30 ಮತಗಳು ಚಲಾವಣೆಯಾದವು.

ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿರುವ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಸಲೀಂ ಅಹ್ಮದ್ ಹಾಗೂ ಮೈತ್ರಿಕೂಟದಿಂದ ಬಿಜೆಪಿಯ ಪಿ.ಎಚ್.ಪೂಜಾರ್ ಕಣದಲ್ಲಿದ್ದರು.

ವಿಧಾನ ಪರಿಷತ್ ನಲ್ಲಿ ಒಟ್ಟು 75 ಸ್ಥಾನಗಳ ಪೈಕಿ ಕಾಂಗ್ರೆಸ್ 38, ಬಿಜೆಪಿ 25, ಜೆಡಿಎಸ್ 6, ಪಕ್ಷೇತರ-1 ಸ್ಥಾನಗಳಿವೆ. ಐದು ಸದಸ್ಯ ಸ್ಥಾನಗಳು ಖಾಲಿಯಿವೆ. ಸಭಾಪತಿ ಸ್ಥಾನಕ್ಕೆ ಏಳು ಪ್ರಸ್ತಾವಗಳು ಬಂದಿದ್ದವು. ಈ ಪೈಕಿ ಐದು ಪ್ರಸ್ತಾವಗಳು ಸಲೀಂ ಅಹ್ಮದ್ ಪರ ಬಂದಿದ್ದವು. ಈ ಹಿನ್ನೆಲೆಯಲ್ಲಿ ಹಂಗಾಮಿ ಸಭಾಪತಿ ಪುಟ್ಟಣ್ಣ ಅವರು ಪ್ರಸ್ತಾವವನ್ನು ಮತಕ್ಕೆ ಹಾಕಿದರು. ಧ್ವನಿಮತದ ಮೂಲಕ ನಡೆದ ಚುನಾವಣೆಯಲ್ಲಿ ಸಲೀಂ ಅಹ್ಮದ್ ಬಹುಮತ ಪಡೆದು ಸಭಾಪತಿಯಾಗಿ ಆಯ್ಕೆಯಾದರು.

ಕರ್ನಾಟಕ ವಿಧಾನ ಪರಿಷತ್ತಿನ ಸರಕಾರಿ ಮುಖ್ಯ ಸಚೇತಕರಾಗಿರುವ ಸಲೀಂ ಅಹ್ಮದ್ ಅವರು ನಾಲ್ಕು ದಶಕಗಳಿಗೂ ಅಧಿಕ ಅವಧಿಯಿಂದ ಸಾರ್ವಜನಿಕ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ