ಎಪ್ಪತರ ದಶಕದ ಅಂತ್ಯದವರೆಗೂ ಭಾರತೀಯ ಕ್ರಿಕೆಟ್ ತಂಡದಲ್ಲಿ ಸ್ಪಿನ್ನರ್ಗಳದ್ದೇ ಪ್ರಾಭಲ್ಯ.  ವೇಗದ ಬೋಲರ್ಗಳೇನಿದ್ದರೂ  ಆರಂಭಿಕ ನಾಲ್ಕಾರು ಓವರ್ಗಳನ್ನು ಮಾಡಿ ಚಂಡಿನ ಹೊಳಪನ್ನು ತೆಗೆದುಕೊಡಲಷ್ಟೇ ಸೀಮಿತವಾದ ಕಾಲದಲ್ಲಿ ಕಪಿಲ್ ದೇವ್  ಅವರ ಆಗಮನವಾಗಿ ವಿಶ್ವಕಪ್ ಗೆಲ್ಲಿಸಿಕೊಟ್ಟ ನಾಯಕನಾಗಿ ಅವರು ನಿವೃತ್ತರಾಗುವ ವೇಳೆಗೆ ಭಾರತದ ವೇಗದ ಬೌಲಿಂಗ್ ನೊಗ ಹೊರುವವರು ಯಾರು ಎಂದು ಯೋಚಿಸುತ್ತಿರುವಾಗಲೇ ನಿಜವಾದ ವೇಗ ಬೋಲಿಂಗ್ ಎಂದರೆ ಹೇಗೆ ಇರುತ್ತದೆ ಎಂದು ತೋರಿಸಿದ, ಕ್ರೀಡಾಭಿಮಾನಿಗಳಿಂದ ಮೈಸೂರು ಎಕ್ಸ್‌ಪ್ರೆಸ್ ಎಂದೇ ಕರೆಸಿಕೊಳ್ಪಡುತ್ತಿದ್ದ ಜಾವಗಲ್ ಶ್ರೀನಾಥ್ ಅವರ ಯಶೋಗಾಥೆ ನಮ್ಮ ಇಂದಿನ ಕನ್ನಡದ ಕಲಿಗಳು ಮಾಲಿಕೆಯಲ್ಲಿ ಇದೋ ನಿಮಗಾಗಿ.sri7

ಹಾಸನ ಜಿಲ್ಲೆಯ ಹಳೇಬೀಡು ಬಳಿಯ ಜಾವಗಲ್ ಗ್ರಾಮದ ಮೂಲದವರಾದ ಶ್ರೀ ಚಂದ್ರಶೇಖರ್ ಮತ್ತು ಶ್ರೀಮತಿ ಭಾಗ್ಯಲಕ್ಷ್ಮೀ ದಂಪತಿಗಳಿಗೆ. ಆಗಸ್ಟ್    31, 1969ರಲ್ಲಿ ಶ್ರೀನಾಥ್ ಅವರು ಜನಿಸುತ್ತಾರೆ. ವ್ಯವಹಾರಸ್ಥರಾಗಿದ್ದ ಅವರ ತಂದೆಯವರು ಮೈಸೂರಿನಲ್ಲೇ ನೆಲೆಸಿದ್ದ ಕಾರಣ, ಶ್ರೀನಾಥ್ ಅವರ ಬಾಲ್ಯವೆಲ್ಲಾ ಮೈಸೂರಿನಲ್ಲೇ ಆಗಿ ಮರಿಮಲ್ಲಪ್ಪ ಶಾಲೆಯಲ್ಲಿ ಅವರ ಪೌಢಶಿಕ್ಷಣ ಪಡೆಯುತ್ತಿರುವಾಗಲೇ ಶಾಲೆಯ ಕ್ರಿಕೆಟ್ ತಂಡದ ನಾಯಕರಾಗಿರುತ್ತಾರೆ. ಪೋಷಕರ ಆಸೆಯಂತೆ ಇಂಜೀನಿಯರಿಂಗ್ ಮೊದಲ 2 ವರ್ಷಗಳನ್ನು ಹಾಸನದ ಮಲ್ನಾಡ್ ಕಾಲೇಜಿನಲ್ಲಿ ನಡೆದು ನಂತರದ 2 ವರ್ಷಗಳು ಮೈಸೂರಿನ ಜಯಚಾಮರಾಜೇಂದ್ರ ಕಾಲೇಜ್ ಆಫ್ ಇಂಜೀನಿಯರಿಂಗ್ ನಲ್ಲಿ ಪದವಿ ಮಾಡುತ್ತಿರುವಾಗಲೇ,  ಕ್ಲಬ್ ಕ್ರಿಕೆಟ್ ಆಡುತ್ತಿರುವಾಗ 6.3″ ಎತ್ತರದ ಈ ವೇಗದ ಬೌಲರ್ ಕರ್ನಾಟಕದ ಮತ್ತೊಬ್ಬ ಕನ್ನಡದ ಕಲಿಗಳಾದ ಶ್ರೀ ಗುಂಡಪ್ಪ ವಿಶ್ವನಾಥ್ ಅವರ ಕಣ್ಣಿಗೆ ಬಿದ್ದದ್ದೇ ತಡಾ ಕರ್ನಾಟಕದ ರಣಜೀ ತಂಡಕ್ಕೆ ಆಯ್ಕೆಯಾಗುತ್ತಾರೆ.

sri8

1989/90 ರಲ್ಲಿ ಕರ್ನಾಟಕ ತಂಡದ ಪರವಾಗಿ ಹೈದರಾಬಾದ್ ವಿರುದ್ಧ  ಪ್ರಥಮ ದರ್ಜೆ ಪಂದ್ಯಗಳಿಗೆ ಪಾದಾರ್ಪಣೆ ಮಾಡಿದ  ಮೊದಲ ಪಂದ್ಯದಲ್ಲೇ ಹ್ಯಾಟ್ರಿಕ್ ಸಾಧನೆ ಮಾಡುವ ಮೂಲಕ ಭರವಸೆಯನ್ನು ಮೂಡಿಸುವುದಲ್ಲದೇ ಮುಂದಿನ ಆರು ಪಂದ್ಯಗಳಲ್ಲಿ 25 ವಿಕೆಟ್‌ಗಳೊಂದಿಗೆ ಋತುವನ್ನು ಮುಗಿಸಿ, ಎರಡನೇ ಋತುವಿನಲ್ಲಿ 20 ವಿಕೆಟ್ ಪಡೆಯುವಷ್ಟರಲ್ಲಿಯೇ ಭಾರತದ ಪರ  18, ಆಕ್ಟೋಬರ್ 1991ರಂದು ಪಾಕ್ ವಿರುದ್ಧ ಶಾರ್ಜಾದಲ್ಲಿ ಏಕದಿನ ಅಂತರಾಷ್ಟ್ರೀಯ ಪಂದ್ಯಗಳಿಗೆ ಪಾದಾರ್ಪಣೆ ಮಾಡಿದರೆ, ಅದೇ ವರ್ಷ

29  ಅಕ್ಟೋಬರ್ 1991ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಬ್ರಿಸ್ಬೇನ್ನಲ್ಲಿ ಭಾರತದ ಪರ ಮೊದಲ ಟೆಸ್ಟ್ ಆಡುತ್ತಾರೆ. ಭಾರತದ ತಂಡದಲ್ಲಿ ಅದಾಗಲೇ ಕಪಿಲ್ ದೇವ್ ಮತ್ತು ಮನೋಜ್ ಪ್ರಭಾಕರ್ ಅವರುಗಳು ಉಚ್ಚ್ರಾಯ ಸ್ಥಿತಿಯಲ್ಲಿದ್ದ ಕಾರಣ ಬಹಳ ದಿನಗಳ ವರೆಗೂ ಶ್ರೀನಾಥ್ ಬೆಂಚು ಕಾಯಿಸುವ ಪರಿಸ್ಥಿತಿಯುಂಟಾಗುತ್ತದೆ.

sri4

ಕಪಿಲ್ ದೇವ್ ಅವರ ನಿವೃತ್ತಿಯಾದ ನಂತರ ಭಾರತದ ಪರ ಟೆಸ್ಟ್ ಮತ್ತು ಏಕದಿನ ಪಂದ್ಯಾವಳಿಯ ತಂಡಕ್ಕೆ ಶ್ರೀನಾಥ್ ವೇಗದ ಬೌಲರ್ ಆಗಿ ಮೊದಲ  ಆಯ್ಕೆಯಾಗಿ ಪರಿಗಣಿಸಲ್ಪಡುವುದಲ್ಲದೇ,  ಕರ್ನಾಟಕದ ಮತ್ತೊಬ್ಬ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಅವರ ಜೊತೆಯಲ್ಲಿ ಭಾರತದ ಪರ ಅತ್ಯುತ್ತಮ ವೇಗದ ಜೋಡಿ ಎನಿಸಿಸುತ್ತಾರೆ. ಅದೊಮ್ಮೆ ಭಾರತದ ತಂಡದಲ್ಲಿ ದ್ರಾವಿಡ್, ವಿಜಯ್ ಭಾರದ್ವಾಜ್, ಕುಂಬ್ಲೆ, ಜೋಷಿ, ವೆಂಕಿ, ದೊಡ್ಡಗಣೇಶ್  ಜೊತೆಯಲ್ಲಿ ಶ್ರೀನಾಥ್ ಹೀಗೆ  11ರ ಬಳಗದಲ್ಲಿ 5-6 ಕರ್ನಾಟಕದ ಆಟಗಾರೇ ಇದ್ದ ಸಂದರ್ಭದಲ್ಲಿಯೂ ಶ್ರೀನಾಥ್ ತಂಡದ ಪರ ಅವಿಭಾಜ್ಯ ಅಂಗವಾಗಿದ್ದರು.

आगे की कहानी पढ़ने के लिए सब्सक्राइब करें

ಡಿಜಿಟಲ್

(1 साल)
USD10
 
ಸಬ್ ಸ್ಕ್ರೈಬ್ ಮಾಡಿ

ಡಿಜಿಟಲ್ + 12 ಪ್ರಿಂಟ್ ಮ್ಯಾಗಜೀನ್

(1 साल)
USD79
 
ಸಬ್ ಸ್ಕ್ರೈಬ್ ಮಾಡಿ
ಬೇರೆ ಕಥೆಗಳನ್ನು ಓದಲು ಕ್ಲಿಕ್ ಮಾಡಿ....
ಗೃಹಶೋಭಾ ವತಿಯಿಂದ